ಅಮಿತ್​ ಶಾ ಸೂಚನೆಗೂ ‘ಮಹಾ’ ಕ್ಯಾತೆ..!

ಭಾನುವಾರ, 18 ಡಿಸೆಂಬರ್ 2022 (18:02 IST)
ಕೇಂದ್ರ ಸರ್ಕಾರದ ಮಧ್ಯಪ್ರವೇಶ ಬಳಿಕವೂ ಮಹಾ ಗಡಿ ವಿವಾದ ನಿಲ್ಲುವಂತೆ ಕಾಣ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಗೂ ಡೋಂಟ್​ಕೇರ್​​ ಎಂದಿರೋ MES ಪುಂಡರು, ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ   ಮಹಾಮೇಳವ್‌ ಆಯೋಜಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರೋ ಸಿಎಂ ಬಸವರಾಜ ಬೊಮ್ಮಾಯಿ, ಎಂಇಎಸ್ ಪುಂಡರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ.. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದ್ಧಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಎಂಇಎಸ್ ಪುಂಡಾಟ ಇದೇ ಮೊದಲಲ್ಲ.. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ ಎಂದಿದ್ದಾರೆ. ಇನ್ನು, ಮಂಗಳೂರು ಕುಕ್ಕರ್​ ಬ್ಲಾಸ್ಟ್​ ತನಿಖೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ಡಿಕೆಶಿ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ