ನಾಳೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆ; ಸಿಎಂ ಭೇಟಿ ಮಾಡಿದ ಸಚಿವ ಸ್ಥಾನದ ಆಕಾಂಕ್ಷಿಗಳು

ಶುಕ್ರವಾರ, 17 ಜನವರಿ 2020 (10:19 IST)
ಬೆಂಗಳೂರು : ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬಿಜೆಪಿಯ ಸಚಿವ ಸ್ಥಾನದ ಆಕಾಂಕ್ಷಿಗಳು  ಕೊನೆಯ ಹಂತದ ಕಸರತ್ತು ಮಾಡಿದ್ದಾರೆ.



ನಾಳೆ  ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸಂಪುಟಕ್ಕೆ ತಮ್ಮ ಹೆಸರು ಪರಿಗಣಿಸುವಂತೆ ಸಿಎಂ ಮೇಲೆ ಒತ್ತಡ ಹಾಕಲು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳು  ಸಿಎಂ ಅವರನ್ನು ಭೇಟಿ ಮಾಡಿದ್ದಾರೆ.


ಉಮೇಶ್ ಕತ್ತಿ, ಹೊಳಲ್ಕೆರೆ ಶಾಸಕ ಚಂದ್ರಪ್ಪ,  ಗೋಪಾಯ್ಯ, ಚುನಾವಣೆಯಲ್ಲಿ ಸೋತಿರುವ  ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ  ಮಾತುಕತೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ