ಸಿದ್ದಗಂಗಾ ಮಠಕ್ಕೆ ಅಮಿತ್ ಶಾ ಭೇಟಿ

ಶನಿವಾರ, 26 ಮಾರ್ಚ್ 2022 (07:00 IST)
ತುಮಕೂರು : ಏಪ್ರಿಲ್ 1 ರಂದು ನಡೆಯಲಿರುವ ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ,

ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ವಿಶೇಷವಾಗಿ ಮಠಕ್ಕೆ ಬರುತ್ತಿದ್ದಾರೆ. ಆ ದಿನ ಒಂದು ಸಭೆ ಇದೆ.

ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮವನ್ನ ನಾವೆಲ್ಲರೂ ಒಟ್ಟಾಗಿ ಯಶಸ್ವಿಗೊಳಿಸಬೇಕು ಎಂದರು. 

ಇದೇ ವೇಳೆ ಸ್ವಾಮಿಜಿಗಳ ಶಿರವಸ್ತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಯುನಿಫಾರ್ಮ್ ಅನ್ನು ವಿರೋಧಿಸುತ್ತಾರೆ.

ಹಿಜಾಬ್ ಅನ್ನು ಸ್ವಾಗತ ಮಾಡ್ತಾರೆ. ಬಹಳ ವರ್ಷಗಳಿಂದ ದೇಶದಲ್ಲಿ ಕಾಂಗ್ರೆಸ್ ಅವರು ಇದನ್ನೇ ಮಾಡ್ಕೊಂಡು ಬಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೇಶದ ಜನ ಜಾಗ ತೋರಿಸ್ತಿದ್ದಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ