ಅಮಿತ್ ಶಾ ವರುಣಾ ಪ್ರವಾಸ ದಿಡೀರ್ ರದ್ದು!

ಶನಿವಾರ, 5 ಮೇ 2018 (09:18 IST)
ಮೈಸೂರು: ಇಂದು ಮೈಸೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಲ್ಲಾ ಸರಿಯಾಗಿದ್ದರೆ ವರುಣಾದಲ್ಲಿ ಬಹಿರಂಗ ಸಭೆ ನಡೆಸಬೇಕಿತ್ತು. ಆದರೆ ಅದೀಗ ರದ್ದಾಗಿದೆ.

ವರುಣಾ ಕ್ಷೇತ್ರದಲ್ಲಿ 16 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಮಿತ್ ಶಾ ಬಹಿರಂಗ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿಯಿತ್ತು. ಆದರೆ ವರುಣಾ ಕ್ಷೇತ್ರದ ಟಿಕೆಟ್ ವಂಚಿತ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರ ಬೆಂಬಲಿಗರ ಪ್ರತಿಭಟನೆಗೆ ಬೆಚ್ಚಿ ಪ್ರವಾಸ ರದ್ದುಗೊಳಿಸಿದ್ದಾರೆ.

ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಬಿವೈ ವಿಜಯೇಂದ್ರ ಬೆಂಬಲಿಗರು ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಹೀಗಾಗಿ ಅಮಿತ್ ಶಾಗೆ ಮುಜುಗರವಾಗುವ ಸಾಧ್ಯತೆಯಿತ್ತು. ಹೀಗಾಗಿ ಅಮಿತ್ ಶಾ ವರುಣಾದಲ್ಲಿ ಪ್ರಚಾರ ನಡೆಸದೇ ಇರಲು ತೀರ್ಮಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ