ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಗೇಟ್ ಪಾಸ್ ಕೊಡಲು ಅಮಿತ್ ಶಾ ಚಿಂತನೆ?!

ಗುರುವಾರ, 15 ನವೆಂಬರ್ 2018 (11:03 IST)
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಚುನಾವಣೆಗಳಲ್ಲಿ ಬಿಜೆಪಿ ವೈಫಲ್ಯಕ್ಕೆ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಲೆದಂಡ ಮಾಡಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಆರ್ ಎಸ್ಎಸ್‍ ಸಂಘನಿಕೇತನದಲ್ಲಿ ಅಮಿತ್ ಶಾ ಸಭೆ ನಡೆಸಿದ ಬಳಿಕ ಇಲ್ಲಿನ ಬಿಜೆಪಿ ನಾಯಕರೊಂದಿಗೂ ಸಭೆ ನಡೆಸಿದ್ದಾರೆ. ಸಂಘನಿಕೇತನದ ಸಭೆ ಬಳಿಕ ಪ್ರಧಾನಿ ಮೋದಿ ಜತೆಗೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಹೀಗಾದರೆ ಬಿಎಸ್ ವೈಗೆ ಗೇಟ್ ಪಾಸ್ ಕೊಟ್ಟು ರಾಜ್ಯ ಬಿಜೆಪಿಗೆ ಹೊಸ ನಾಯಕನನ್ನು ನೇಮಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಆ ಮೂಲಕ ವಿಫಲದ ಸುಳಿಯಲ್ಲಿರುವ ರಾಜ್ಯ ಬಿಜೆಪಿಗೆ ಹೊಸ ಟಾನಿಕ್ ನೀಡಲು ಅಮಿತ್ ಶಾ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ