ಹೀಗೇ ಹೋಗಿ ಹಾಗೇ ಬರಲಿರುವ ಅಮಿತ್ ಶಾ!

ಭಾನುವಾರ, 1 ಏಪ್ರಿಲ್ 2018 (06:03 IST)
ಬೆಂಗಳೂರು: ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ದೆಹಲಿಗೆ ತೆರಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ಇಂದು ಕರ್ನಾಟಕಕ್ಕೆ ಮರಳಲಿದ್ದಾರೆ.

ಇಂದು ಹುಬ್ಬಳ್ಳಿ ಭಾಗದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಅಮಿತ್ ಶಾಗೆ ಜತೆಯಾಗಲಿದ್ದಾರೆ.

ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ ಹುಬ್ಬಳ್ಳಿ ಮತದಾರರನ್ನು ಸೆಳೆಯವ ಯತ್ನ ನಡೆಸಲಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಕರ್ನಾಟಕದಲ್ಲೇ ಬೀಡುಬಿಟ್ಟಿರುವ ಅಮಿತ್ ಶಾ ಈ ವಾರ ಕೂಡಾ ಬಹುತೇಕ ರಾಜ್ಯ ರಾಜಕೀಯಕ್ಕೆ ಹೆಚ್ಚಿನ ಸಮಯ ಮೀಸಲಿಡಲಿದ್ದಾರೆ. ಟಿಕೆಟ್ ಹಂಚಿಕೆ ಮುಂತಾದ ಮಹತ್ವದ ವಿಚಾರಗಳ ಬಗ್ಗೆ ಅವರು ಈ ವಾರ ತೀರ್ಮಾನ ಕೈಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ