ಬಸ್ ನಲ್ಲಿ ಅನುಮಾನ ಬಂದ ವ್ಯಕ್ತಿಯನ್ನು ಏನ್ಮಾಡಿದ್ರು ಗೊತ್ತಾ?

ಭಾನುವಾರ, 14 ಏಪ್ರಿಲ್ 2019 (17:44 IST)
ಲೋಕಸಭಾ ಚುನಾವಣೆ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ಹಾಗೂ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಚೆಕ್‌ ಪೋಸ್ಟ್‌ನಲ್ಲಿ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 11.50 ಲಕ್ಷ ಹಣವನ್ನ ವಶಕ್ಕೆ ಪಡೆದು ವ್ಯಕ್ತಿಯನ್ನ ಬಂಧಿಸಿದ್ದಾರೆ.

ಅಂದಹಾಗೆ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 7 ರ ರಾಣಿಕ್ರಾಸ್ ಬಳಿ ಅಧಿಕಾರಿಗಳು ಕೆಎಸ್‌ಆರ್‌ಟಿಸಿ ಬಸ್ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಅಚಲ್ ಅಶೋಕ್ ಎಂಬುವವರು ತನ್ನ ಬ್ಯಾಗ್‌ನಲ್ಲಿ 11.5 ಲಕ್ಷವನ್ನ ಯಾವುದೇ ದಾಖಲೆಗಳಿಲ್ಲದೆ ಸಾಗಾಟ ಮಾಡ್ತಿದ್ರು.

ಅನುಮಾನ ಬಂದ ಪೊಲೀಸರು ಹಣ ಹಾಗೂ ವ್ಯಕ್ತಿಯನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ