ಅಸ್ಸಾಂ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಬೆಂಗಳೂರಿನಲ್ಲಿ ನಡೆಯಿತು ಇಂತಹ ಕೃತ್ಯ!

ಶನಿವಾರ, 19 ಡಿಸೆಂಬರ್ 2020 (09:57 IST)
ಬೆಂಗಳೂರು : ಬೆಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಅಸ್ಸಾಂ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಬೆಂಗಳೂರಿನಲ್ಲಿ ಮಾನಭಂಗ  ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಅನಿಸೂರ್ ರಹಮಾನ ಈ ಕೃತ್ಯ ಎಸಗಿದ ಆರೋಪಿ ಎನ್ನಲಾಗಿದೆ. ಈತನ ಮೂಲಕ ವಿದ್ಯಾರ್ಥಿನಿಗೆ ಬೆಂಗಳೂರು ಕಾಲೇಜಿಗೆ ಪ್ರವೇಶವಾಗಿದೆ. ಇಬ್ಬರು ಪರಿಚಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಹುಡುಗಿ ಕಾಲೇಜಿಗೆ ಬಂದಿದ್ದು, ಆ ವೇಳೆ ಆರೋಪಿ ತನ್ನ ಗೆಳೆಯರ ಜೊತೆ ಸೇರಿ ಇಂತಹ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಸ್ಸಾಂ ಸಂಸದರು ಸಿಎಂಗೆ ಮನವಿ ಮಾಡಿದ್ದಾರೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ