ಬೆಂಗ್ಳೂರಲ್ಲೊಂದು ಅಮಾನವೀಯ ಘಟನೆ : ವಿಷವುಣಿಸಿ 18 ಶ್ವಾನಗಳ ಹತ್ಯೆ!

ಸೋಮವಾರ, 14 ಆಗಸ್ಟ್ 2023 (11:50 IST)
ಬೆಂಗಳೂರು : ಸಾಕು ಪ್ರಾಣಿಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ನಡುವೆ ಕಿತ್ತಾಟ ನಡೆಯುವುದು ಹೊಸತೇನಲ್ಲ. ನಾಯಿ ಬೊಗಳುತ್ತಿದೆ ಎಂದೋ, ಕಚ್ಚಿದೆ ಎಂದೋ ದೊಡ್ಡ ಮಾರಾಮಾರಿಗಳೇ ನಡೆದ ನಿದರ್ಶನಗಳೇ ಇವೆ.
 
ಈ ನಡುವೆ ಮನುಷ್ಯನ ಅಟ್ಟಹಾಸ ಮೀತಿ ಮೀರುತ್ತಿದ್ದು ಅಮಾನವೀಯ ಘಟನೆಗಳು ಹೆಚ್ಚಾಗ್ತಿವೆ. ಬೆಂಗಳೂರಿನಲ್ಲಿ ನಡೆದಿರುವ ಘಟನೆ ಇದಕ್ಕೆ ತಾಜಾ ಉದಾಹರಣೆಯಾಗಿದೆ.18 ಶ್ವಾಗಳಿಗೆ ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಆರ್ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ. 

ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ಸಂಪೂರ್ಣ ಕೊಳೆತುಹೋಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ