ಬಿಜೆಪಿ ಸಭೆಯಲ್ಲಿ ಚುನಾವಣಾ ಫಲಿತಾಂಶದ ವಿಶ್ಲೇಷಣೆ

ಭಾನುವಾರ, 21 ಮೇ 2023 (20:06 IST)
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಧ್ಯಾಹ್ನ ನಡೆದ ಪ್ರಮುಖರ ಸಭೆಯಲ್ಲಿ ರಾಜ್ಯದ ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಣೆ ಮಾಡಲಾಯಿತು.ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆತ್ಮಾವಲೋಕ‌ನ ಸಭೆ ನಡೆಸಿದ್ರು.ಇನ್ನೂ ಸಭೆಯಲ್ಲಿ ಚುನಾವಣೆ ಸೋಲಿನ ಕಾರಣಗಳ ಬಗ್ಗೆ ಮತ್ತು ಬಹಳಷ್ಟು ಕ್ಷೇತಗಳಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಸೋಲು ಕಂಡಿದ್ದು.ಸೋಲಿನ ಕಾರಣಗಳ ಬಗ್ಗೆ ಜಿಲ್ಲಾಧ್ಯಕ್ಷರಿಂದ ವಿವರಣೆ ಪಡೆದ್ರು.ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆಹ್ವಾನಿತರು ಈ ಸಭೆಯಲ್ಲಿ ಭಾಗವಹಿಸಿದ್ದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ