ಬೆಂಗಳೂರು ಜ್ಞಾನಭಾರತಿಯಲ್ಲಿರುವ ಕಲಾಗ್ರಾಮದಲ್ಲಿ ಅನಂತಮೂರ್ಸತಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಕಲಾಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು. ಮಡುಗಟ್ಟಿದ ಶೋಕದ ನಡುವೆ ಪೊಲೀಸ್ ಬ್ಯಾಂಡ್ನಲ್ಲಿ ರಾಷ್ಟ್ರಗೀತೆ ಮೊಳಗಿತು. ಕುಶಾಲ ತೋಪು ಹಾರಿಸಿ ಗೌರವ ಸಲ್ಲಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿತ್ತು. ಬ್ರಾಹ್ಮಣ ಮಾಧ್ವ ಪದ್ಧತಿ ಪ್ರಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
50 ಕೆಜಿ ಶ್ರೀಗಂಧ, 75 ಕೆಜಿ ತುಪ್ಪ, 25,000 ರೂ. ಹೂವು, 20 ಕೆಜಿ ಕೊಬ್ಬರಿ, 2 ಮೂಟೆ ಬೆರಣಿಯನ್ನು ಅಂತ್ಯಸಂಸ್ಕಾರಕ್ಕೆ ಬಳಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ವಸತಿ ಸಚಿವ ಅಂಬರೀಷ್ ಮುಂತಾದ ಗಣ್ಯರು ಅನಂತಮೂರ್ತಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು..