ಇವತ್ತಾದರೂ ಈಡೇರುತ್ತಾ ಅಂಗನವಾಡಿ ಕಾರ್ಯಕರ್ತೆಯರ ವೇತನದ ಬೇಡಿಕೆ
ಕಳೆದ ತಿಂಗಳು ಫ್ರೀಡಂಪಾರ್ಕ್ ಬಳಿ 4 ದಿನ ಕಾರ್ಯಕರ್ತೆಯರೂ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಏಪ್ರಿಲ್`ನಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಇವತ್ತೂ ಸಹ ಬೇಡಿಕೆ ಈಡೇರದಿದ್ದರೆ ಸಿಎಂ ಮನೆಗೇ ಮುತ್ತಿಗೆ ಹಾಕಲು ಅಂಗನವಾಡಿ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.