ಅಂಗನವಾಡಿ ಚಾವಣಿ ಕುಸಿತ, ಮಗುವಿಗೆ ಗಾಯ

ಭಾನುವಾರ, 13 ಆಗಸ್ಟ್ 2023 (18:00 IST)
ಅಂಗನವಾಡಿ ಮೇಲ್ಛಾವಣಿ ಪ್ಲಾಸ್ಟರ್​ ಕುಸಿತವಾಗಿ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ‌ ಪೊಲೀಸ್ ಠಾಣಾ ವ್ಯಾಪ್ತಿಯ ಮರಕಲ್ ಗ್ರಾಮದಲ್ಲಿ ನಡೆದಿದೆ. 10 ತಿಂಗಳ ಮಗು ಕೀರ್ತಿ ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ. ಗಾಯಾಳು ಕೀರ್ತಿಗೆ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ಇಂದ್ರಧನುಷ್​​ 5.O ಲಸಿಕೆಗೆ ಚಾಲನೆ ನೀಡಿದ್ದರು. ಮರಕಲ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇಂದ್ರಧನುಷ್ ಲಸಿಕೆ ಹಾಕುತ್ತಿದ್ದು, ಮಕ್ಕಳ ಮತ್ತು ಪೋಷಕರು ಬಂದಿದ್ದಾರೆ. ಕೇಂದ್ರದಲ್ಲಿ ಇಂದ್ರಧನುಷ್ ಲಸಿಕೆ ಹಾಕುತ್ತಿರುವಾಗಲೇ ಮೇಲ್ಛಾವಣಿಯ ಪ್ಲಾಸ್ಟರ್ ಕುಸಿದಿದ್ದು, 10 ತಿಂಗಳ ಮಗು ಕೀರ್ತಿ ಸೇರಿ ಮೂವರ ತಲೆ ಮೇಲೆ ಬಿದ್ದಿದೆ. ಇನ್ನು ಅಲ್ಲಿಯೇ ಇದ್ದ ಇತರ ಆರು ಮಕ್ಕಳು ಹಾಗೂ ಪೋಷಕರು ಪಾರಾಗಿದ್ದಾರೆ. ಕಳಪೆ ಕಟ್ಟಡ ನಿರ್ಮಾಣವೇ ಘಟನೆಗೆ ಕಾರಣ ಅಂತಾ ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ