ಅನಿರ್ದಿಷ್ಟವಾದಿ ಮುಷ್ಕರಕ್ಕೆ ಸಜ್ಜಾಗಿ ಬಂದ ಅಂಗನವಾಡಿ ಕಾರ್ಯಕರ್ತೆಯರು

ಸೋಮವಾರ, 23 ಜನವರಿ 2023 (15:10 IST)
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ರಾತ್ರಿ ಇಡೀ ಟ್ರೈನ್ ಹಾಗೂ ಬಸ್ ಗಳಲ್ಲಿ ಸಂಚಾರ ನಡೆಸಿ ಫ್ರೀಡಂ ಪಾರ್ಕ್ ನಲ್ಲಿ  ನಾರಿಯರು ಪ್ರತಿಭಟನೆಗೆ ಕುಳಿತಿದ್ದಾರೆ.
 
ಊಟದ ಬುತ್ತಿ ಹಾಗೂ ಲಗೇಜ್ ಸಮೇತ ಅನಿರ್ದಿಷ್ಟವಾದಿ ಮುಷ್ಕರಕ್ಕೆ  ಕಾರ್ಯಕರ್ತೆಯರು ಸಜ್ಜಾಗಿದ್ದು,ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದುಬೇಡಿಕೆಗಳು ಈಡೇರುವ ವರೆಗು  ಪ್ರತಿಭಟನೆ ಮುಂದುವರೆಸೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ಸರ್ಕಾರದ ಪ್ರಮುಖರು ಬಂದು ಮಾತುಕತೆ ನಡೆಸುವ ವರೆಗೂ ಮುಷ್ಕರ ಮುಂದುವರೆಸೋದಾಗಿ ಪಟ್ಟು ಹಿಡಿದಿದ್ದಾರೆ.ಅಲ್ಲದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಸುಪ್ರೀಂ ಆದೇಶದಂತೆ ಗ್ರ್ಯಾಜುಟಿ ಹಣ ಫಿಕ್ಸ್ ಮಾಡಬೇಕು ಹೊಸ ಶಿಕ್ಷಣ ನೀತಿಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನಾಗಿ ನೋಡಬೇಕು,ಎಲ್ಲ ಇಲಾಖೆಯ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸ ಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ‌.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ