ಸಿ.ಪಿ. ಯೋಗಿಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ-ಓಕೆ ಎಂದರು ಕುಮಾರಸ್ವಾಮಿ

ಬುಧವಾರ, 10 ಜನವರಿ 2018 (07:46 IST)
ಬೆಂಗಳೂರು : ಅನಿತಾ ಕುಮಾರಸ್ವಾಮಿ ಅವರು ಚೆನ್ನಪಟ್ಟಣದಲ್ಲಿ ಜೆಡಿಎಸ್ ಪರ ಕಣಕ್ಕಿಳಿಯುವುದಾಗಿ ತಿಳಿದು ಬಂದಿದ್ದು, ಈ ವಿಚಾರವನ್ನು ಬುಧವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಸುದ್ಧಿಗೋಷ್ಠಿ ನಡೆಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

 
ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಬೇಕೆಂಬ  ಒತ್ತಾಯಕ್ಕೆ ಮಣಿದು ಹೆಚ್.ಡಿ.ಕುಮಾರಸ್ವಾಮಿ ಅವರು ಅಸ್ತು ಎಂದಿದ್ದಾರೆ. ಜೆ.ಪಿ. ನಗರದ ತಮ್ಮ ನಿವಾಸದಲ್ಲಿ 3 ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿ ಚೆನ್ನಪಟ್ಟಣದ ಜೆಡಿಎಸ್ ಮುಂಖಡರ ಮನವಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಓಕೆ ಎಂದಿದ್ದಾರೆ. ದೂರವಾಣಿ ಮೂಲಕ ಮಾಧ್ಯಮವೊಂದಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಸಿ.ಪಿ. ಯೋಗಿಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧೆಗಿಳಿದಿರುವುದಂತು ಖಚಿತ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ