ಉದ್ಯಮಿಗಳ ಬಗ್ಗೆ ಮಾತ್ರ ಚಿಂತಿಸುತ್ತಿರುವ ಸರ್ಕಾರ– ಅಣ್ಣಾ ಹಜಾರೆ

ಬುಧವಾರ, 31 ಜನವರಿ 2018 (17:58 IST)
ಕೇಂದ್ರ ಸರ್ಕಾರ ಉದ್ಯಮಿಗಳ ಬಗ್ಗೆ ಮಾತ್ರ ಚಿಂತೆ ಮಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ರೈತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬಗ್ಗೆ ಸರ್ಕಾರಕ್ಕೆ ಚಿಂತೆಯಿಲ್ಲ ಎಂದ ವಾಗ್ದಾಳಿ ನಡೆಸಿದ್ದಾರೆ.
 
ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಯಾವುದೇ ಭರವಸೆ ಈಡೇರಿಲ್ಲ. ನಮ್ಮ ಮಾತನ್ನೂ ಸರ್ಕಾರ ಕೇಳುತ್ತಿಲ್ಲ. ಮಾರ್ಚ್ 23ರಿಂದ ಸ್ವಾಮಿನಾಥನ್ ವರದಿ ಜಾರಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ. ಉಪವಾಸದಿಂದ ನನ್ನ ಪ್ರಾಣಹೋದರೂ ಚಿಂತೆಯಿಲ್ಲ. ರೈತರಿಗಾಗಿ ನೆಮ್ಮದಿಯಿಂದ ಸಾಯುತ್ತೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ