ಬಿಎಸ್ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ

ಶುಕ್ರವಾರ, 21 ಜುಲೈ 2023 (13:10 IST)
ಶಿವಮೊಗ್ಗ : ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
 
ಶುಕ್ರವಾರ (ಜುಲೈ 21) ನಡೆಯುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಗದೀಶ್ ಹೇಳಿದ್ದಾರೆ. ಗೌರವ ಡಾಕ್ಟರೇಟ್ ಘೋಷಣೆ ಹಿನ್ನೆಲೆ ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

 
ಈ ಬಗ್ಗೆ ಟ್ವೀಟ್ ಮಾಡಿದ ಅವರು, “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್ಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡಿಸುವ ಜತೆ ಸದಾ ರೈತಪರ ಕಾಳಜಿ ವಹಿಸುವ ತಮ್ಮ ರಾಜಕೀಯ ಜೀವನ ಪ್ರೇರಣಾದಾಯಕವಾಗಿದೆ” ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ