ಸಾಲಬಾಧೆ ತಾಳಲಾರದೆ ಮತ್ತೋರ್ವ ರೈತ ಆತ್ಮಹತ್ಯೆ

ಶನಿವಾರ, 27 ಜೂನ್ 2015 (11:50 IST)
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಇಂದು ಜಿಲ್ಲೆಯಲ್ಲಿ ಮತ್ತೋರ್ವ ಅನ್ನದಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. 
 
ಮೃತ ರೈತನನ್ನು ಜಗದೀಶ್ ಕಿಡೇಗಣ್ಣಿ(45) ಎನ್ನಲಾಗಿದ್ದು, ಜಿಲ್ಲೆಯ ಹೂಡಗುಂದ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಸಾಲಬಾಧೆಯಿಂದ ನರಳುತ್ತಿದ್ದ ಈತ ಸಾಲ ತೀರಿಸಲಾಗದೆ ಮನನೊಂದು ತನ್ನ ಹೋಲದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 
 
ಈತನಿಗೆ 5 ಎಕರೆ ಭೂಮಿ ಇದ್ದು, 2.5 ಎಕರೆಯಲ್ಲಿ ವ್ಯವಸಾಯ ಮಾಡುತ್ತಿದ್ದ. ಆದರೆ ಬೆಳೆ ಕೈಗೆಟಕದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿದ್ದ. ಜೆತೆಗೆ ಎಡಿಬಿಐ ಬ್ಯಾಕ್‌ನಲ್ಲಿ 2.5 ಲಕ್ಷ ಸಾಲ ಮಾಡಿಕೊಂಡಿದ್ದ. ಆದರೆ ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ನೋಟಿಸ್ ಜಾರಿಗೊಳಿಸಿದ್ದರು. ಅಲ್ಲದೆ ಖಾಸಗಿಯವರಿಂದಲೂ ಕೂಡ ಸಾಲ ಮಾಡಿದ್ದ ಎನ್ನಲಾಗಿದ್ದು, ಅವರೂ ಕೂಡ ಸಾಲ ನೀಡುವಂತೆ ದುಂಬಾಲು ಬಿದ್ದಿದ್ದರು. ಇದರಿಂದ ದುಗುಡಕ್ಕೊಳಗಾಗಿ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.   
 
ಈ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ