ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ನಕಲಿ ಸಹಿ ಆರೋಪದಡಿ ರಾಜ್ಯಪಾಲರಿಗೆ ದೂರು

Sampriya

ಭಾನುವಾರ, 25 ಆಗಸ್ಟ್ 2024 (09:58 IST)
ಮೈಸೂರು: ಮುಡಾ ನಿವೇಶನ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯನ್ನು ಬೇರೆಯವರು ನಕಲು ಮಾಡಿದ್ದಾರೆ ಎಂದು ಆರೋಪಿಸಿರುವ ಇಲ್ಲಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಈ ಬಗ್ಗೆ ಲೋಕಾಯುಕ್ತರಿಂದ ತನಿಖೆ ಮಾಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ರಾಜ್ಯಪಾಲ ಥಾವತ್‌ಚಂದ್‌ ಗೆಹಲೋತ್‌ ಅವರಿಗೆ  ಶನಿವಾರ ದೂರು ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಮುಖ್ಯಮಂತ್ರಿ ವಿರುದ್ಧ ಮತ್ತೊಂದು ದೂರು ಸಲ್ಲಿಸಿದಂತಾಗಿದೆ.

ಮುಖ್ಯಮಂತ್ರಿಯು ಕನ್ನಡದಲ್ಲಿ ಸಹಿ ಮಾಡುವುದು ಸಾಮಾನ್ಯ. ಸಾಕಷ್ಟು ಸರ್ಕಾರಿ ದಾಖಲೆಗಳಲ್ಲಿ ಕನ್ನಡದಲ್ಲಿ ಸಹಿ ಇರುವುದನ್ನು ಗಮನಿಸಿದ್ದೇನೆ. ಆದರೆ, ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಬರೆದಿರುವ ಪತ್ರ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಮಾಣಪತ್ರದಲ್ಲಿ ಅವರ ಸಹಿ ಇಂಗ್ಲಿಷ್‌ ನಲ್ಲಿದೆ. ಅದು ನಕಲು ಆಗಿದ್ದು, ಬೇರೆ ಯಾರೋ ಸಹಿ ಮಾಡಿದ್ದಾರೆ. ಆದ್ದರಿಂದ ಅದನ್ನು ಗಮನಿಸಿ ಸಾಂವಿಧಾನಿಕ ಹುದ್ದೆಯ ಗೌರವ ಕಾಪಾಡಬೇಕು ಎಂದು ಕೋರಿದ್ದಾರೆ.

ದೂರಿನೊಂದಿಗೆ ಆರು ದಾಖಲೆಗಳನ್ನು ನೀಡಿರುವುದಾಗಿ  ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ