ಸಚಿವ ರಮಾನಾಥ್ ರೈ ಕುರಿತಾದ ಮತ್ತೊಂದು ವಿಡಿಯೋ ವೈರಲ್

ಗುರುವಾರ, 22 ಜೂನ್ 2017 (11:23 IST)
ಮಂಗಳೂರು: ಮೊನ್ನೆಯಷ್ಟೇ ಕಲ್ಲಡ್ಕ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ರನ್ನು ಬಂಧಿಸಲು ಸಚಿವ ರಮಾನಾಥ್ ರೈ ಆದೇಶಿಸುತ್ತಿರುವ ವಿಡಿಯೋ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.

 
ಇದೀಗ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಇದೇ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ನಿರ್ದಿಷ್ಟ ಕೋಮಿನ ಯುವಕನನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶಿಸುತ್ತಿರುವ ವಿಡಿಯೋ ಒಂದನ್ನು ಖಾಸಗಿ ವಾಹಿನಿಯೊಂದು ಬಿಡುಗಡೆ ಮಾಡಿದೆ.

ಆದರೆ ಸೂಕ್ತ ಸಾಕ್ಷ್ಯಗಳಿಲ್ಲದೆ ಬಂಧಿಸಲಾಗದು ಎಂದು ಎಸ್ ಪಿ ಸ್ಪಷ್ಟನೆ ನೀಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ ಎನ್ನಲಾಗಿದೆ. ಇದೀಗ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ