ಭ್ರಷ್ಟಾಚಾರ ವಿರೋಧಿಸುವ ಅಮಿತ್‌ಶಾಗೆ, ಬಿಎಸ್‌ವೈ ಜೈಲಿಗೆ ಹೋಗಿದ್ದು ಮರೆತಂತಿದೆ: ಪರಮೇಶ್ವರ್

ಶನಿವಾರ, 12 ಆಗಸ್ಟ್ 2017 (15:15 IST)
ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸಿಎಂ ಘೋಷಿತ ಅಭ್ಯರ್ಥಿ ಯಡಿಯೂರಪ್ಪ ಜೈಲಿಗೆ ಹೋಗಿರುವುದನ್ನು ಮರೆತಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರು ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ ಎನ್ನುತ್ತಾರೆ. ನೋಟ್‌ಬ್ಯಾನ್‌ನಿಂದ ದೇಶದ ಆರ್ಥಿಕತೆ ಕುಸಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದಿಂದಾಗಿ ರೈತರ ಸಾಯುತ್ತಿದ್ದರೂ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಿಡಿಗಾಸು ಅನುದಾನ ಬಿಚ್ಚಲಿಲ್ಲ ಎಂದು ಗುಡುಗಿದ್ದಾರೆ.
 
ಮಹದಾಯಿ, ಕಾವೇರಿ ನದಿ ವಿವಾದ ಸೇರಿದಂತೆ ಕೇಂದ್ರ ಸರಕಾರಕ್ಕೆ ಹಲವಾರು ಬಾರಿ ಪತ್ರ ಬರೆದು ನಿಯೋಗದೊಂದಿಗೆ ಭೇಟಿ ಮಾಡಿದ್ದರೂ ರಾಜ್ಯದ ಬಗ್ಗೆ ಕೇಂದ್ರ ಸರಕಾರ ಮಲತಾಯಿ ಧೋರಣೆ ತಳೆದಿದೆ. ಇದೀಗ ರಾಜ್ಯದ ಜನತೆಯ ಮತ ಕೇಳಲು ಆಗಮಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ