ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಅನುಪ್ರಿಯಾ ಪಟೇಲ್ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುವ ಮೂಲಕ ಎಲ್ಲರ ಹುಬ್ಬೆರಿಸಿದ್ದಾರೆ. ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನುವ ಅನುಮಾನಗಳು ಪ್ರತಿಯೊಬ್ಬರನ್ನು ಕಾಡುತ್ತಿವೆ.
ಕುರ್ಮಿ ಸಮುದಾಯದ ಪ್ರಬಲ ನಾಯಕರಾಗಿದ್ದ ತಂದೆ ಸೋನೆಲಾಲ್ ಪಟೇಲ್ ಸ್ಥಾಪಿಸಿದ್ದ ಅಪ್ನಾ ದಳ್ ಪಕ್ಷದಿಂದ ಉತ್ರಪ್ರದೇಶದ ಮಿರ್ಜಾಪುರದಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದ ಅನುಪ್ರಿಯಾ, ಚುನಾವಣೆಯಲ್ಲಿ ಜಯಗಳಿಸಿ ಸಂಸದೆಯಾಗಿದ್ದರು.
ಬಿಜೆಪಿ ಬೆಂಬಲ ಮತ್ತು ಪಟೇಲ್ ಸಮುದಾಯದ ನೆರವಿಂನೊಂದಿಗೆ ಅಪ್ನಾ ದಳ್ ಪಕ್ಷಕ್ಕೆ ಮತ್ತಷ್ಟು ಬಲ ತಂದುಕೊಡಲಿದೆ ಎನ್ನುವುದು ಅನುಪ್ರೀಯಾ ಪಟೇಲ್ ಅವರ ವಿಶ್ವಾಸವಾಗಿದೆ.
ಆನುಪ್ರೀಯಾ ಪಟೇಲ್ರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ಉತ್ತರಪ್ರದೇಶದ ಚುನಾವಣೆಯಲ್ಲಿ ಓಬಿಸಿ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ. ಆದರೆ, ಮತ್ತೊಬ್ಬ ಕುರ್ಮಿ ನಾಯಕ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡಾ ಮುಂಬರುವ ಚುನಾವಣೆಯಲ್ಲಿ ಪ್ರತಿ ರಣತಂತ್ರ ಹೆಣೆದಿದ್ದಾರೆ.
ನವದೆಹಲಿಯ ಲೇಡಿ ಶ್ರೀರಾಮ್ ಕಾಲೇಜಿನಲ್ಲಿ ಮಾಸ್ಟರ್ ಪದವಿಯನ್ನು ಪಡೆದಿರುವ ಸಚಿವೆ ಅನುಪ್ರೀಯಾ 2012 ರಲ್ಲಿ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.