ಅಸಮಧಾನಗೊಂಡ ಎಲ್ಲಾ ಶಾಸಕರೂ ಕೂಡ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದು, ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಮಧ್ಯಂತರ ತಡೆ ನೀಡಿತ್ತು. ಆದರೆ ಇಲ್ಲಿಯವರೆಗೂ ಕೂಡ ಮುಂದಿನ ಕ್ರಮ ಕೈಗೊಂಡಿಲ್ಲ. ಇನ್ನು ನೈಸ್ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರೂ ಕೂಡ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಅಧ್ಯಕ್ಷರು ರೈತರೊಂದಿಗೇ ನೇರವಾಗಿ ಚರ್ಚಿಸಬೇಕು. ಇಂತಹ ಅನೇಕ ಸಮಸ್ಯೆಗಳಿದ್ದರೂ ಕೂಡ ಅಧ್ಯಕ್ಷರು ಕೇವಲ ಕಾಟಾಚಾರಕ್ಕೆ ಮಾತ್ರ ಸಮಿತಿ ಸಭೆ ನಡೆಸಿದ್ದಾರೆ ಹೊರತು ಸದಸ್ಯರ ಯಾವ ಬೇಡಿಕೆಯೂ ಅನುಷ್ಠಾನಗೊಳಿಸಿಲ್ಲ ಎಂದು ಶಾಸಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.