ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನಾಳೆ ಅನುಮೋದನೆ

geetha

ಬುಧವಾರ, 28 ಫೆಬ್ರವರಿ 2024 (20:02 IST)
ಬೆಂಗಳೂರು-ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ.ಈಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 29-02-2024ರಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಅದೇ ದಿನ ಸಂಜೆ 7ಗಂಟೆಗೆ ಮುಂದೂಡಲಾಗಿದೆ ಎಂದಿದ್ದಾರೆ.
 
ನಾಳೆ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಅಭಿವೃದ್ಧಿ ಯೋಜನೆಗಳು, ಕಾಮಗಾರಿಗಳಿಗೆ ಅನುಮೋದನೆ ದೊರೆಯೋ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ