ತಮಿಳುನಾಡಿಗೆ ನೀರು ಬಿಡಲು ಕರ್ನಾಟಕ ಸರಕಾರ ಪ್ರಯತ್ನಿಸಲಿ: ಸುಪ್ರೀಂಕೋರ್ಟ್

ಶುಕ್ರವಾರ, 2 ಸೆಪ್ಟಂಬರ್ 2016 (13:50 IST)
ತಮಿಳುನಾಡಿಗೆ ನೀರು ಬಿಡಲು ಕರ್ನಾಟಕ ಸರಕಾರ ಪ್ರಯತ್ನಿಸಬೇಕು. ಬದುಕಿ, ಬದುಕಲು ಬಿಡಿ ತತ್ವಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಕರ್ನಾಟಕ ಸರಕಾರಕ್ಕೆ ಸುಪ್ರೀಂಕೋರ್ಟ್ ಪೀಠ ಸಲಹೆ ನೀಡಿದೆ.
 
ಆದರೆ ಎಷ್ಟು ಪ್ರಮಾಣದ ನೀರು ಬಿಡಬೇಕು ಎನ್ನುವುದು ಸುಪ್ರೀಂಕೋರ್ಟ್ ತಿಳಿಸಿಲ್ಲ ಎಂದು ಕರ್ನಾಟಕ ಸರಕಾರದ ಪರ ವಕೀಲರು ತಿಳಿಸಿದ್ದಾರೆ.
 
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಉದಯ್ ಲಲಿತ್ ನೇತೃತ್ವದ ಪೀಠ, ರಾಜ್ಯ ಸರಕಾರ ತಮಿಳುನಾಡಿಗೆ ಆದಷ್ಟು ನೀರು ಹರಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ