ಮಂಗಳೂರಿನ ಹಿಂಸಾಚಾರದ ಬಗ್ಗೆ ಪ್ರಚೋದನಾಕಾರಿ ಪೋಸ್ಟ್ ಮಾಡಿದ ಮತ್ತೊಬ್ಬ ಆರೋಪಿ ಅರೆಸ್ಟ್

ಶುಕ್ರವಾರ, 3 ಜನವರಿ 2020 (11:26 IST)
ಮಂಗಳೂರು : ಮಂಗಳೂರಿನಲ್ಲಿ ನಡೆದ ಹಿಂಸಾಚಾದ ಬಗ್ಗೆ ಪ್ರಚೋದನಾಕಾರಿ ಪೋಸ್ಟ್ ಮಾಡಿದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಉಳ್ಳಾಲದ ಅಬೂಬಕರ್ ಸಿದ್ದಿಕ್ ಯಾನೆ ಜಲ್ಲಿ ಸಿದ್ದಿಕ್ ಬಂಧಿತ ಆರೋಪಿಯಾಗಿದ್ದು, ಈತ ಅಫ್ಘಾನಿಸ್ತಾನ , ಸಿರಿಯಾದಲ್ಲಿ ನಡೆದ ದೌರ್ಜನ್ಯದ ದೃಶ್ಯಗಳನ್ನು ಮಂಗಳೂರಿನಲ್ಲಿ ನಡೆದ ದೃಶ್ಯಗಳೆಂದು ಹೇಳಿ ವಾಟ್ಸಾಪ್ ನಲ್ಲಿ ಪೋಸ್ಟ್ ಮಾಡಿದ್ದಾನೆ.

 

ಈ ಹಿನ್ನಲೆಯಲ್ಲಿ ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸೈಬರ್ ಅಪರಾಧ ಪೊಲೀಸರು ಆತನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ಈತನ ಮೇಲೆ ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಆರೋಪವಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ