ಹಣ ಹಂಚುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನು ಬಂಧಿಸಿ: ಶೋಬಾ ಕರಂದ್ಲಾಜೆ

ಗುರುವಾರ, 6 ಏಪ್ರಿಲ್ 2017 (18:16 IST)
ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಹಣವನ್ನು ಹಂಚಿ ಮತದಾರರಿಂದ ಮತಗಳನ್ನು ಪಡೆಯಲು ಹವಣಿಸುತ್ತಿದ್ದಾರೆ. ಹಣದಿಂದ ಚುನಾವಣೆ ಗೆಲ್ಲಬಹುದು ಎಂದು ಭಾವಿಸಿದ್ದಾರೆಂದು ಗುಡುಗಿದ್ದಾರೆ.
 
ಚುನಾವಣೆ ಅಧಿಕಾರಿಗಳು ಕೂಡಲೇ ಹೆಬ್ಬಾಳ್ಕರ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು. ಕಾಂಗ್ರೆಸ್ ಕಾರ್ಯಕರ್ತರು ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಹಣ ಹಂಚುವುದು ಕಾಯಕವಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ಬಿಜೆಪಿ ನಾಯಕಿ ಭಾರತೀ ಶೆಟ್ಟಿ ಗುಡುಗು
 
ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಣದ ಅವ್ಯವಹಾರದಲ್ಲಿ ತೊಡಗಿರುವುದು ಇದು ಮೊದಲಲ್ಲ. ಈಗಾಗಲೇ ಅವರ ಮನೆಯಲ್ಲಿ ಹಣದ ಕಂತೆ ಕಂತೆಗಳು ದೊರೆತಿದ್ದು ಪ್ರಕರಣ ದಾಖಲಾಗಿದೆ. ಇದೀಗ ಹಣ ಹಂಚುತ್ತಿರುವ ವಿಡಿಯೋ ನೋಡಿದ ಕೂಡಲೇ ಹೆಬ್ಬಾಳ್ಕರ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಭಾರತೀ ಶೆಟ್ಟಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ