ನಗರದ ಪಿಲಿಕುಳದಲ್ಲಿ ಎರಡು ದಿನಗಳ ರಾಜ್ಯ ಸಮ್ಮೇಳನ `ಸಂಗಮ ಸಂಭ್ರಮ'ಕ್ಕೆ ಕನ್ನಡದ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಸುವ ಕಾರ್ಯಕ್ರಮಗಳಲ್ಲಿ ಕಲಾವಿದರ ಸಂಭಾವನೆಯನ್ನು ಇದುವರೆಗೆ ಬೆಂಗಳೂರಿನಲ್ಲಿ ಪರಿಶೀಲಿಸಿ ಆಧ ಬಳಿಕ ಅವರ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಇದನ್ನು ಸರಳಗೊಳಿಸಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿಯೇ ಪರಿಶೀಲಿಸಿ ಜಿಲ್ಲೆಯಿಂದಲೇ ನೇರವಾಗಿ ಖಾತೆಗೆ ರವಾನೆಯಾಗಲಿದೆ
ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಜೆ.ಆರ್.ಲೋಬೋ, ಜಿ.ಪಂ. ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವಾ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.