ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸೂಚನೆ

ಗುರುವಾರ, 17 ಜೂನ್ 2021 (09:17 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.


ನಿನ್ನೆ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಅರುಣ್ ಸಿಂಗ್ ಈ ಸೂಚನೆ ನೀಡಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಸಿಎಂ ಎಂದು ಖಡಕ್ ಆಗಿ ಹೇಳಿದ್ದಾರೆ. ಈ ಸಮಯದಲ್ಲಿ ಸಚಿವರುಗಳು ಕೊರೋನಾ ನಿಯಂತ್ರಣದ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಇನ್ನು, 30 ಶಾಸಕರು ಅರುಣ್ ಸಿಂಗ್ ಭೇಟಿಗೆ ಸಮಯ ಕೇಳಿದ್ದಾರೆ. ಬೆಳಿಗ್ಗೆ 9.30 ರಿಂದ ಶಾಸಕರು ಒಬ್ಬೊಬ್ಬರಾಗಿ ಅರುಣ್ ಸಿಂಗ್ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಳ್ಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ