ಅರವಿಂದ್ ಕೇಜ್ರಿವಾಲ್ಗೆ ಸಿಗದ ರಿಲೀಫ್, ಮಧ್ಯಂತರ ಅರ್ಜಿ ವಜಾ ಮಾಡಿದ ಕೋರ್ಟ್
ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ. ಪ್ರಕರಣದಲ್ಲಿ ಡೀಫಾಲ್ಟ್ ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯವು ಜೂನ್ 7 ರಂದು ಕೈಗೆತ್ತಿಕೊಳ್ಳಲಿದೆ.
ಮಾರ್ಚ್ನಲ್ಲಿ ಬಂಧಿಸಲ್ಪಟ್ಟ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳಲು ಜೂನ್ 1ರ ವರೆಗೆ ಮಧ್ಯಂತರ ಜಾಮೀನು ನೀಡಲಾಯಿತು. ಅದರಂತೆ ಜೂನ್ 2ರಂದು ತಿಹಾರ್ ಜೈಲಿಗೆ ಅರವಿಂದ್ ಕೇಜ್ರಿವಾಲ್ ಅವರು ವಾಪಾಸ್ಸಾದರು.