ಕೊರೊನಾ ಪರೀಕ್ಷೆಗೆ ಹೋದ ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನ

ಭಾನುವಾರ, 26 ಏಪ್ರಿಲ್ 2020 (22:30 IST)
ಕೊರೊನಾ ವೈರಸ್ ಪರೀಕ್ಷೆ ನಡೆಸಲು ಹೋಗಿದ್ದ ಸಂದರ್ಭ ಆಶಾ ಕಾರ್ಯಕರ್ತೆಯೊಬ್ಬರನ್ನು ಹೀಯಾಳಿಸಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತೆಗೆ ಜಿಲ್ಲಾ ಉಸ್ತುವಾರಿ ಸಚಿವ ಧೈರ್ಯ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಆತನ ತಂದೆ ಹೀಯಾಳಿಸಿದ್ದು, ಇದರಿಂದ ಮನನೊಂದ ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಮೈಸೂರಿನಲ್ಲಿ ವಿದ್ಯಾರಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೀನಾಕ್ಷಿ ಅವರನ್ನು ಭೇಟಿ ನೀಡಿ ಧೈರ್ಯ ತುಂಬಿದರು.

ಇದೇ ಸಂದರ್ಭದಲ್ಲಿ ಅವರಿಗೆ  ನೀಡುತ್ತಿರುವ ಚಿಕಿತ್ಸೆಯ ಬಗ್ಗೆ  ವೈದ್ಯರೊಂದಿಗೆ ಸಚಿವರು ಚರ್ಚಿಸಿ, ಕಾರ್ಯಕರ್ತೆಗೆ ಯಾವುದೇ ತೊಂದರೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ. ಸರ್ಕಾರದ ಪರವಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಬಂದು ಭೇಟಿ ಮಾಡಿದ್ದಾರೆ ಎಂದಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ