ಬಾಡಿಗೆ ಮನೆ ಕೇಳುವ ನೆಪ; ಮಹಿಳೆಗೆ ಎಂಥಾ ಗತಿ ಬಂತು?

ಗುರುವಾರ, 28 ಫೆಬ್ರವರಿ 2019 (20:44 IST)
ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯೊಬ್ಬರಿಗೆ ಮಾಡಬಾರದ ಕೆಲಸ ಮಾಡಿ, ದೋಚಿಕೊಂಡು ಪರಾರಿಯಾಗಿದ್ದಾರೆ.

ಒಂಟಿಯಾಗಿದ್ದ ಮಹಿಳೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿ ಪರಾರಿಯಾದ ದುರ್ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲದಲ್ಲಿ ನಡೆದಿದೆ.

ದೊಡ್ಡಬೆಳವಂಗಲದ ಚೆನ್ನಮ್ಮ (64) ಕೊಲೆಯಾದವರು. ಚೆನ್ನಮ್ಮ ಅವರ ಪತಿ ಮೃತಪಟ್ಟು ಮಕ್ಕಳು ಬೆಂಗಳೂರಿನಲ್ಲಿ ನೆಲೆಸಿದ್ದರಿಂದ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು.

ಆರ್ಥಿಕವಾಗಿ ಸ್ಥಿತಿವಂತರಾಗಿದ್ದ ಚೆನ್ನಮ್ಮ ಅವರಿಗೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಎರಡು ಮನೆ ಇವೆ.  ಒಂದರಲ್ಲಿ ತಾವು ವಾಸವಾಗಿದ್ದರು. ಮತ್ತೊಂದು ಮನೆಯನ್ನು ಬಾಡಿಗೆ ಕೊಟ್ಟಿದ್ದರು. ಇತ್ತೀಚೆಗೆ ಮನೆ ಖಾಲಿಯಾಗಿದ್ದು, ದುಷ್ಕರ್ಮಿಗಳು ಬಾಡಿಗೆ ಕೇಳುವ ನೆಪದಲ್ಲಿ ಬಂದು ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ