ಸೋಮವಾರ ಸಂಜೆ ತೇಜಸ್ವಿರಾಜ್ ಪತ್ನಿ ಜತೆ ಸಿಟಿ ಸೆಂಟರ್ಗೆ ತೆರಳಿದ್ದರು. ಈ ಸಮಯದಲ್ಲಿ ಅಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ತೆರವುಗೊಳಿಸುವಂತೆ ತೇಜಸ್ವಿ ಅವರು ಭದ್ರತಾ ಸಿಬ್ಬಂದಿಯನ್ನು ಒತ್ತಾಯಿಸಿದ್ದಾರೆ. ಆದರೆ, ಇದಕ್ಕೆ ಒಪ್ಪದ ಸಿಬ್ಬಂದಿ ಹಾಗೂ ತೇಜಸ್ವಿ ಅವರ ನಡುವೆ ವಾಗ್ವಾದ ಶುರುವಾಗಿದೆ ಎನ್ನಲಾಗುತ್ತಿದೆ.