ರೌಡಿ ಶೀಟರ್ ನಿಂದ ಪೊಲೀಸರ ಮೇಲೆ ಹಲ್ಲೆ; ಫೈರಿಂಗ್

ಬುಧವಾರ, 10 ಜುಲೈ 2019 (14:26 IST)
ರೌಡಿ ಶೀಟರ್ ನೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಪ್ರತಿಯಾಗಿ ಪೊಲೀಸರು ಫೈರಿಂಗ್ ನಡೆಸಿ ರೌಡಿಯ ಹೆಡೆಮುರಿ ಕಟ್ಟಿದ್ದಾರೆ.

ಮಾವಿನಹಣ್ಣು ವ್ಯಾಪಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ರೌಡಿ ಶೀಟರ್ ಮೇಲೆ ಪೊಲೀಸ್ ರು ಗುಂಡು ಹಾರಿಸಿದ್ದಾರೆ.

ರೌಡಿ ಶೀಟರ್ ಭವಿತ್ ರಾಜ್ ಎಂಬಾತನಿಗೆ ಶೂಟ್ ಮಾಡಲಾಗಿದೆ. ಆತನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಯಿಂದ ಹಲ್ಲೆ ನಡೆದಿದೆ. ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದನು ರೌಡಿ.

ಸ್ವರಕ್ಷಣೆಗಾಗಿ ರೌಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಪೊಲೀಸರು. ಪಂಪ್ ವೆಲ್ ನಲ್ಲಿ ಗೂಡ್ಸ್ ಟೆಂಪೋ ಚಾಲಕನ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ‌ ಕೇಸಲ್ಲಿ ಭವಿತ್ ರಾಜ್ ಭಾಗಿಯಾಗಿರುವುದು ಗಮನಕ್ಕೆ ಬಂದಿತ್ತು.

ರೌಡಿಯನ್ನು ಬಂಧಿಸಲು ಅಡ್ಯಾರ್ ಗೆ ಹೋಗಿದ್ದರು ಕಂಕನಾಡಿ ಪೊಲೀಸರು. ಆಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದನು ಆರೋಪಿ.

ಆತ್ಮ ರಕ್ಷಣೆಗಾಗಿ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ