ರಾಜ್ಯ ಕಾಂಗ್ರೆಸ್ ಉಸ್ತವಾರಿ ಸಚಿವ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಸೋಲಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೆ ಕಾಂಗ್ರೆಸ್ ವರಿಷ್ಠರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.ಚುನಾವಣೆ ಸೋಲಿನ ಕುರಿತು ಪಕ್ಷದಲ್ಲಿ ಆಂತರಿಕವಾಗಿ ಚರ್ಚೆ ನಡೆಸಬೇಕಿತ್ತು. ಈ ರೀತಿಯಾಗಿ ಬಹಿರಂಗವಾಗಿ ಸಂದೇಶ ರವಾನಿಸುವುದು ಅಸಮಂಜಸ ಎಂದು ಕಾಂಗ್ರೆಸ್ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.