ಎಟಿಎಂ ಹಲ್ಲೆಕೋರ ಮಧುಕರ ರೆಡ್ಡಿ ಬೆಂಗಳೂರಿಗೆ

ಮಂಗಳವಾರ, 7 ಮಾರ್ಚ್ 2017 (09:15 IST)
ಎಟಿಎಂ ಹಲ್ಲೆಕೋರ ಮಧುಕರ ರೆಡ್ಡಿಯನ್ನು ಬೆಂಗಳೂರಿಗೆ ಕರೆತರಲಾಗಿದೆ.
ಇಂದು ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಬಳಿಕ ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ.
 
2013ರ ನವೆಂಬರ್ 19ರಂದು ಕಾರ್ಪೊರೇಷನ್ ವೃತ್ತದ ಎಟಿಎಂನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿತ್ತು.  ಘಟನೆ ನಡೆದ 3 ವರ್ಷಗಳ ಬಳಿಕ, ಕಳೆದ ತಿಂಗಳು ಆರೋಪಿ ಮಧುಕರ್ ರೆಡ್ಡಿಯನ್ನು ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆತನನ್ನು ವಿಚಾರಣೆಗೊಳಪಡಿಸಿದ್ದ ಆಂಧ್ರ ಪೊಲೀಸರು ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ