ಎಟಿಎಂ ಒಡೆದು 16 ಲಕ್ಷ ರೂಪಾಯಿ ದೋಚಿದ ದರೋಡೆಕೋರರು!

ಮಂಗಳವಾರ, 24 ಜನವರಿ 2017 (09:17 IST)
ಎಟಿಎಂ ಮಶಿನ್ ಒಡೆದು ಬರೊಬ್ಬರಿ 16 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಮಧ್ಯರಾತ್ರಿ ತುಮಕೂರು ಜಿಲ್ಲೆಯ ಗುಬ್ಬಿ ಗೇಟ್ ಬಳಿಯ ಕರ್ನಾಟಕ ಬ್ಯಾಂಕ್‌ನ ಎಟಿಎಂಗೆ ನುಗ್ಗಿದ ಮೂವರು ದರೋಡೆಕೋರರು ಸೆಕ್ಯೂರಿಟಿ ಗಾರ್ಡ್‌ನ್ನು ಕಟ್ಟಿ ಹಾಕಿ ಈ ಕೃತ್ಯ ನಡೆಸಿದ್ದಾರೆ.
 
 ದರೋಡೆ ಮಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಬಾರದು ಎಂದು ಆಲೋಚಿಸಿದ ದರೋಡೆಕೋರರು ಎಟಿಎಂ ಕೇಂದ್ರದಲ್ಲಿರುವ ಸಿಸಿಟಿವಿ ಕ್ಯಾಮೆರಾದ ವೈರ್ ಕಟ್ ಮಾಡಿದ್ದರು ಎಂದು ತಿಳಿದು ಬಂದಿದೆ.
 
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ತಿಲಕ್‌ ಪಾರ್ಕ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ