ನಿನ್ನೆರಾತ್ರಿ ಸರಿ ಸುಮಾರು 12 ಗಂಟೆ ವೇಳೆಯಲ್ಲಿ ದಾಳಿ ನಡೆಸಿರುವ ದುಷ್ಕರ್ಮಿಗಳು, ಪ್ರಾರ್ಥನಾ ಮಂದಿರದ ಕಿಟಕಿಗಾಜುಗಳನ್ನು ಕಲ್ಲುಗಳಿಂದ ಹೊಡೆದು ಪುಡಿಪುಡಿ ಮಾಡಿದ್ದಾರೆ. ಪ್ರಕರಣವು ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.