ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ

ಭಾನುವಾರ, 12 ಫೆಬ್ರವರಿ 2023 (14:44 IST)
ಮಂಗಳೂರು : ಕನ್ಯಾಕುಮಾರಿ ಸಮುದ್ರದಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಕಲ್ಲೆಸೆದು ಹಲ್ಲೆ ನಡೆಸಿದ ಘಟನೆ ನಡೆದಿದೆ.
 
ಆಳ ಸಮುದ್ರದ ಮೀನುಗಾರಿಕೆಗೆ ಮಂಗಳೂರಿನಿಂದ ಸುಮಾರು ಏಳೆಂಟು ಬೋಟ್ಗಳು ಕನ್ಯಾಕುಮಾರಿ ಬಳಿ ತೆರಳಿದ್ದರು. ಈ ವೇಳೆ ತಮಿಳುನಾಡಿನ ಕನ್ಯಾಕುಮಾರಿ ಬಳಿ ಮಂಗಳೂರು ಮೀನುಗಾರರು ಮೀನುಗಾರಿಕೆ ನಡೆಸುತ್ತಿದ್ದಾಗ ತಮಿಳು ಮೀನುಗಾರರು ಅವರನ್ನು ತಡೆದಿದ್ದಾರೆ.

ಅದಾದ ಬಳಿಕ ಸಮುದ್ರದ ಮಧ್ಯೆಯೇ ಹತ್ತಾರು ಬೋಟ್ಗಳಿಂದ ಸುತ್ತುವರಿದು ಮಂಗಳೂರಿನ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ