ಬಟ್ಟೆಯನ್ನೂ ಹರಿದು ಶಾಸಕನ ಮೇಲೆ ಹಲ್ಲೆ - ಸ್ಥಳದಲ್ಲಿ ವಿಡಿಯೋ ಹರಿಬಿಟ್ಟ ಶಾಸಕ

ಸೋಮವಾರ, 21 ನವೆಂಬರ್ 2022 (15:40 IST)
ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಘಟನೆ ಸಂಬಂಧ ಮಹಿಳೆಯ ಮೃತದೇಹ ನೋಡಲು ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಥಳಕ್ಕೆ ತೆರಳಿದರು. ಈ ವೇಳೆ ಎಂ.ಪಿ.ಕುಮಾರಸ್ವಾಮಿಗೆ ಗ್ರಾಮಸ್ಥರು ಘೇರಾವ್ ಹಾಕಿ ಹಲ್ಲೆ ನಡೆಸಿದ್ದಾರೆ. ಬಟ್ಟೆಯನ್ನೂ ಹರಿದು ಶಾಸಕನ ಮೇಲೆ ಆಕ್ರೋಶ ಹೊರಹಾಕಿದ್ದಾರೆ.
 
  ಇತ್ತ ಶಾಸಕ ಹರಿದ ಬಟ್ಟೆಯಲ್ಲೇ ವಿಡಿಯೋ ಹರಿಬಿಟ್ಟಿದ್ದಾನೆ.ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹವನ್ನು ವೀಕ್ಷಿಸಲು ತೆರಳಿದೆ.ನನ್ನ ಮೇಲೆ ಗ್ರಾಮಸ್ಥರು ಆಕ್ರೋಶಗೊಂಡು ಅಟ್ಟಾಡಿಸಿದ್ದಲ್ಲದೇ ಹಲ್ಲೆಯನ್ನೂ ಮಾಡಿದ್ದಾರೆ.ಇದು ವ್ಯವಸ್ಥಿತ ಪಿತೂರಿತಯಾಗಿದೆ. ನಮ್ಮದೇ ಸರ್ಕಾರದ ಪೊಲೀಸ್ ಇಲಾಖೆ ನನಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಶಾಸಕ  ಎಂಪಿ ಕುಮಾರಸ್ವಾಮಿ ಅಸಾಮಾಧಾನ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ