ಉಗ್ರರ ಮೇಲೆ ಏರ್ ಸ್ಟ್ರೈಕ್ ದಾಳಿ ನಡೆಸಿದ ಭಾರತಕ್ಕೆ ಬ್ಯಾಡ್ ಟೈಂ ಶುರುವಾಗಿದೆ ಎಂದ ಬಿಕಾಂ ವಿದ್ಯಾರ್ಥಿ

ಬುಧವಾರ, 27 ಫೆಬ್ರವರಿ 2019 (16:35 IST)
ಚಾಮರಾಜನಗರ : ಭಾರತೀಯ ವಾಯುಸೇನೆ ಪಾಕಿಸ್ತಾನ ಗಡಿಯಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದಕ್ಕೆ ಕಿಡಿಗೇಡಿಯೊಬ್ಬ ಭಾರತಕ್ಕೆ ಬ್ಯಾಡ್ ಟೈಂ ಶುರುವಾಗಿದೆ ಎಂದು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಾನೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಕೌದಳ್ಳಿ ಗ್ರಾಮದ ಬಿಕಾಂ ವಿದ್ಯಾರ್ಥಿ ಮೊಹಮ್ಮದ್ ನೌಶಾದ್ ಎಂಬಾತ ಏರ್ ಸ್ಟ್ರೈಕ್ ಮೂಲಕ ಉಗ್ರರ ನೆಲೆಗಳನ್ನು ಭಾರತೀಯ ವಾಯುಸೇನೆ ದಮನಗೊಳಿಸಿದ ಬಳಿಕ ವಿಲ್ ವೈಟ್ ಅಂಡ್ ಸೀ, ಇಂಡಿಯಾ ಬ್ಯಾಡ್ ಟೈಮ್ಸ್ ಸ್ಟಾರ್ಟ್ ನೌ. ಪಾಕಿಸ್ತಾನ ಟೇಕ್ ರಿವೆಂಜ್ ಎಂದು ಸ್ಟೇಟಸ್ ಹಾಕಿಕೊಂಡಿದ್ದಾನೆ. ಅಲ್ಲದೆ, ಪಾಕಿಸ್ತಾನದ ಧ್ವಜದ ಚಿತ್ರ ಹಾಕಿ ಜೈಪಾಕಿಸ್ತಾನ ಎಂದು ಬರೆದು ಪೋಸ್ಟ್ ಮಾಡಿದ್ದಾನೆ.

 

ಈ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ