ಬಿ.ಎಸ್. ಯಡಿಯೂರಪ್ಪಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ಪ್ರದಾನ

ಮಂಗಳವಾರ, 19 ಅಕ್ಟೋಬರ್ 2021 (13:11 IST)
ದಾವಣಗೆರೆ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಪ್ರಮುಖರಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿವಿಧ ಸಂಘ ಸಂಸ್ಥೆಗಳಿಂದ ಬಿ.ಎಸ್. ಯಡಿಯೂರಪ್ಪಗೆ ಸನ್ಮಾನ ಮಾಡಲಾಗಿದೆ. ಇನ್ನೂ ಕೊರೊನಾ ಸಂಕಷ್ಟ ಮುಗಿದಿಲ್ಲ. ಆದಷ್ಟು ಜಾಗೃತರಾಗಬೇಕಾಗಿದೆ. ಕೊರೊನಾ ವಾರಿಯರ್ ಸೇವೆ ಎಷ್ಟು ಶ್ರಮಿಸಿದರೂ ಕಡಿಮೆ. ಜನರ ಜೀವ ಉಳಿಸಿದ್ದು ಕೊರೊನಾ ವಾರಿಯರ್ಗಳು. ಕೊರೊನಾ ಬಂದ ವೇಳೆ ಮನೆಯವರೇ ನೋಡಿಕೊಳ್ಳಲಾಗದ ಪರಿಸ್ಥಿತಿಯಲ್ಲಿ ವಾರಿಯರ್ಗಳು ಕೆಲಸ ಮಾಡಿದ್ದಾರೆ ಎಂದು ಈ ವೇಳೆ ಯಡಿಯೂರಪ್ಪ ಮಾತನಾಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಆಧುನಿಕ ಭಗೀರಥ. ಅವರು ಹೊನ್ನಾಳಿ ತಾಲೂಕಿನ ಕೆರೆಗಳನ್ನು ತುಂಬಿಸಲು 500 ಕೋಟಿ ರೂಪಾಯಿ ಅನುದಾನ ನೀಡಿದ್ದರು. ಹೊನ್ನಾಳಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಇಂದು ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ನೀಡಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ