ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸಾರಥ್ಯ

ಶುಕ್ರವಾರ, 10 ನವೆಂಬರ್ 2023 (20:33 IST)
Photo Courtesy: Twitter
ಬೆಂಗಳೂರು: ಅಂತೂ ಇಂತೂ ಕರ್ನಾಟಕ ಬಿಜೆಪಿಗೆ ಹೊಸ ಸಾರಥಿಯ ಆಯ್ಕೆಯಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಪುತ್ರ, ಶಾಸಕ ಬಿ.ವೈ ವಿಜಯೇಂದ್ರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ಮತ್ತೆ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿದ್ದಾರೆ.

ಚುನಾವಣೆ ಮುಗಿದು ಇಷ್ಟು ದಿನವಾಗಿದ್ದರೂ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕವಾಗಿಲ್ಲ ಎಂಬ ವಿಚಾರಕ್ಕೆ ಕಾಂಗ್ರೆಸ್ ಆಗಾಗ ಬಿಜೆಪಿಗೆ ಟಾಂಗ್ ಕೊಡುತ್ತಲೇ ಇತ್ತು. ಸ್ವತಃ ಬಿಜೆಪಿಯಲ್ಲೇ ಈ ಬಗ್ಗೆ ಅಸಮಾಧಾನಗಳಿದ್ದವು. ಇದೀಗ ಕೊನೆಗೂ ನೂತನ ಅಧ್ಯಕ್ಷರ ಆಯ್ಕೆಯಾಗಿದೆ. ಈ ಮೊದಲು ಈ ಹುದ್ದೆಗೆ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ.ಟಿ. ರವಿ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಲಿಂಗಾಯಿತರ ಮತ ಸೆಳೆಯುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ ವಿಜಯೇಂದ್ರಗೆ ಮಣೆ ಹಾಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ