ಪ್ರಕರಣವು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೊಳಪಟ್ಟಿದ್ದು, ಪ್ರಕರಣದಲ್ಲಿ ಪಿತೂರಿ ನಡೆಸಿದ್ದರು ಎಂಬ ಆರೋಪ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಉಮಾಭಾರತಿ, ಮುರಳಿ ಮನೋಹರ್ ಜೋಷಿ, ಉತ್ತಪ ಪ್ರದೇಶ ರಾಜ್ಯದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ ಒಟ್ಟು 20 ಮಂದಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಸಿಬಿಐಗೂ ಕೂಡ ನೋಟಿಸ್ ನೀಡಿರುವ ನ್ಯಾಯಾಲಯ, ನಾಲ್ಕು ವಾರಗಳ ಒಳಗೆ ಉತ್ತರಿಸುವಂತೆ ಸೂಚಿಸಿದೆ.
ಅದರಲ್ಲಿ ವ್ಯವಸ್ಥಿತ ಸಂಚು ರೂಪಿಸಿ ಮಸೀದಿಯನ್ನು ಧ್ವಂಸ ಮಾಡಲಾಗಿದ್ದು, ಮಸೀದಿ ಧ್ವಂಸದ ಕಾರ್ಯಾಚರಣೆಗೆ ಆರ್ಎಸ್ಎಸ್ ಸಂಘಟಕರು 'ಆಪರೇಷನ್ ಜನ್ಮಭೂಮಿ' ಎಂದು ಹೆಸರಿಟ್ಟಿದ್ದರು. ಇದಲ್ಲದೆ ಮಸೀದಿಯ ಧ್ವಂಸಕ್ಕಾಗಿ ಎರಡು ತಿಂಗಳ ಮೊದಲೇ ಆರ್ಎಸ್ಎಸ್ ನಾಯಕರು ತಮ್ಮ ಸಂಘ ಪರಿವಾರದ ಸ್ವಯಂ ಸೇವಕರಿಗೆ ತರಬೇತಿ ನೀಡಿದ್ದರು ಎಂಬ ಸಂಗತಿ ಬಯಲಾಗಿತ್ತು.
23 ಜನರ ವಿರುದ್ಧ ನಡೆಸಿದ್ದ ರಹಸ್ಯ ಕಾರ್ಯಾಚರಣೆ ಇದಾಗಿದ್ದು, ಇದರಲ್ಲಿ ಅಂದಿನ ಪ್ರಧಾನಿ ಪಿ.ವಿ. ನರಸಿಂಹ ರಾವ್, ಅಡ್ವಾಣಿ, ಕಲ್ಯಾಣ್ ಸಿಂಗ್ ಸೇರಿದಂತೆ ಇತರರಿಗೆ ಮಸೀದಿ ಧ್ವಂಸಕ್ಕೂ ಮೊದಲೇ ಧ್ವಂಸದ ಬಗ್ಗೆ ಮಾಹಿತಿ ಇತ್ತು ಎಂಬ ಅಂಶ ಬಯಲಾಗಿತ್ತು.