ರಾಜ್ಯಕ್ಕೆ ಮತ್ತೆ ವರುಣಾಗಮನ

ಶುಕ್ರವಾರ, 8 ಏಪ್ರಿಲ್ 2022 (20:07 IST)
ರಾಜ್ಯಾದ್ಯಂತ ಏಪ್ರಿಲ್​ 10ರವರೆಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕಳೆದ 15 ದಿನದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಭಾನುವಾರದವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ