ಸಾರ್ಜನಿಕರ ಒತ್ತಡದ ಹಿನ್ನಲೆ; ಎಸ್ಪಿ ಅಣ್ಣಾಮಲೈ ವರ್ಗಾವಣೆ ರದ್ದು

ಗುರುವಾರ, 21 ಫೆಬ್ರವರಿ 2019 (12:09 IST)
ಬೆಂಗಳೂರು : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹಲವು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳನ್ನು ರಾತ್ರೋ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಅವರನ್ನು ಕೂಡ  ವರ್ಗಾವಣೆ ಮಾಡಲಾಗಿತ್ತು.  ಆದರೆ ಸಾರ್ಜನಿಕರ ಒತ್ತಡದ ಹಿನ್ನಲೆಯಲ್ಲಿ ಅಣ್ಣಾಮಲೈ ಅವರ ವರ್ಗಾವಣೆ ರದ್ದುಪಡಿಸಲಾಗಿದ್ದು, ದಕ್ಷಿಣ ವಲಯ ಡಿಸಿಪಿ ಹುದ್ದೆಯಲ್ಲೇ ಅಣ್ಣಾಮಲೈ ಮುಂದುವರಿಯಲಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಸೂಚಿಸಿದ್ದಾರೆ.


ಹಾಗೇ ಬೆಂಗಳೂರಿನ ದಕ್ಷಿಣ ವಲಯ ಡಿಸಿಪಿ ಆಗಿ ನಿಯೋಜಿತರಾಗಿದ್ದ ಇಶಾಪಂತ್ ಅವರಿಗೆ ಆಗ್ನೇಯ ವಿಭಾಗದ ಡಿಸಿಪಿ ಸ್ಥಾನ ನೀಡಲು ನಿರ್ಧರಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ