ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ; ಸಚಿವ ಸಿಸಿ ಪಾಟೀಲ್ ಆಸ್ಪತ್ರೆಗೆ ದಾಖಲು

ಸೋಮವಾರ, 27 ಜನವರಿ 2020 (09:57 IST)
ಗದಗ : ಗದಗ ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ, ಪರಿಸರ, ಜೀವಶಾಸ್ತ್ರ ಇಲಾಖೆ ಸಚಿವ ಸಿಸಿ ಪಾಟೀಲ್ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಆಸಿಡಿಟಿ ಮತ್ತು ಹೈಬಿಪಿ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ನಗರದ ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದೀಗ ಚಿಕಿತ್ಸೆ ಪಡೆಯುತ್ತಿದ್ದ ಸಚಿವರಿಗೆ ಯಾವುದೇ ಅಪಾಯವಿಲ್ಲ, ಸದ್ಯದಲ್ಲೇ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ