ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮದರಸಾ ಸಂಪೂರ್ಣ ಬಂದ್ : ಯತ್ನಾಳ್

ಶುಕ್ರವಾರ, 17 ಮಾರ್ಚ್ 2023 (07:13 IST)
ಬೆಳಗಾವಿ : ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಬೆಳಗಾವಿಯಲ್ಲಿ ಶಿವಚರಿತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ರೀತಿ ಕರ್ನಾಟಕದಲ್ಲಿ ಮದರಸಾ ಬಂದ್ ಮಾಡುತ್ತೇವೆ ಎಂದ ಅವರು, ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿಯಲು ಶಿವಾಜಿ ಮಹಾರಾಜರು ಕಾರಣರಾಗಿದ್ದಾರೆ.

ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್, ಅಜರುದ್ದೀನ್ ಪಟೇಲ್ ಆಗಿ ಇರುತ್ತಿದ್ದರು ಎಂದರು. ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹಾಡಿ ಹೊಗಳಿದ ಅವರು, ಅಸ್ಸಾಂ ಹಿಂದೂಸ್ತಾನ ಬಿಟ್ಟು ಹೋಗುವ ವಾತಾವರಣ ಇತ್ತು.

ಹಿಮಂತ ಬಿಸ್ವಾ ಶರ್ಮಾರಿಂದ ಅಸ್ಸಾಂನಲ್ಲಿ ಹಿಂದೂಗಳು ಜೀವನ ಮಾಡಲು ಸಾಧ್ಯವಾಯಿತು ಎಂದ ಅವರು, ನನಗೊಬ್ಬರು ಶಿವಾಜಿ ಮಹಾರಾಜರ ಬಗ್ಗೆ ಮಾತನಾಡುತ್ತೀಯಾ ಅವರಿಗೆ ಹುಟ್ಟಿದಿಯಾ ಎಂದು ಹೇಳಿದ್ದರು. ಹೌದು ನಾನು ಶಿವಾಜಿ ಸಂತಾನವಾಗಿದ್ದು, ಟಿಪ್ಪು ಸುಲ್ತಾನನ ಸಂತಾನವಲ್ಲ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ