ಇಂದು ಸಂಜೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

ಗುರುವಾರ, 23 ಮಾರ್ಚ್ 2023 (14:47 IST)
14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಇಂದಿನಿಂದ ಆರಂಭವಾಗಲಿದ್ದು ಸಂಜೆ 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
 
ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ ಮುಖ್ಯ ಅತಿಥಿಯಾಗಿ ಬರುತ್ತಿದ್ದು, ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ವಿಧಾನಸೌಧದ ಮೆಟ್ಟಿಲು ಮೇಲೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದು, ಹರ್ಷಿಕಾ ಪೂಣಚ್ಚ ದೀಪ ಕಾರ್ಯಕ್ರಮಕ್ಕೆ ನೆರವು ನೀಡಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ