ಅಗ್ನಿ ಶ್ರೀಧರ್ ಮನೆ ಮೇಲೆ ಪೊಲೀಸರ ದಾಳಿ

ಮಂಗಳವಾರ, 7 ಫೆಬ್ರವರಿ 2017 (10:45 IST)
ಬೆಂಗಳೂರು:  ಪತ್ರಕರ್ತ ಅಗ್ನಿ ಶ್ರೀಧರ್ ಮನೆ ಮೇಲೆ ಪೊಲೀಸ್ ದಾಳಿ ನಡೆದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇ ಔಟ್ ನಲ್ಲಿರುವ ಅವರ ನಿವಾಸದ ಮೇಲೆ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.
 

ಬೆಂಗಳೂರಿನಲ್ಲಿ ಕಡಬಗೆರೆ ಶ್ರೀನಿವಾಸ್ ಮೇಲೆ ಫೈರಿಂಗ್ ನಡೆಸಿದ ಆರೋಪದಲ್ಲಿ ರೌಡಿ ಶೀಟರ್ ಒಂಟೆ ಅಲಿಯಾಸ್ ರೋಹಿತ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈತನಿಗೆ ಶ್ರೀಧರ್ ಮನೆಯಲ್ಲಿ ಆಶ್ರಯ ನೀಡಿದ್ದಾರೆಂಬ ಅನುಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಕೋರ್ಟ್ ನಿಂದ ವಾರಂಟ್ ತಂದು ಹೇಮಂತ್ ನಿಂಬಾಳ್ಕರ್ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಹೇಮಂತ್ ನಿಂಬಾಳ್ಕರ್ ನೇತೃತ್ವದ ತಂಡ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ